ಉಪ್ಪಿನಂಗಡಿ: ಯುವಕ ಆತ್ಮಹತ್ಯೆ
ಉಪ್ಪಿನಂಗಡಿ: ಮೃತರಾದ ತಂದೆಯ ಚಿಂತೆಯಲ್ಲಿದ್ದ ಮಗ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಗೋಳಿತ್ತೊಟ್ಟು ಗ್ರಾಮದ ಅನಾಲು ಎಂಬಲ್ಲಿ ನಡೆದಿರುವುದಾಗಿ ವರದಿಯಾಗಿದೆ.
ಮೃತ ಯುವಕನನ್ನು ಗೋಳಿತ್ತೊಟ್ಟು ಗ್ರಾಮದ ಅನಾಲು ನಿವಾಸಿ ದಿ.ವಾಸಪ್ಪ ಗೌಡರವರ ಪುತ್ರ ಶ್ರೀಹರ್ಷ ಗೌಡ(21) ಎಂದು ಗುರುತಿಸಲಾಗಿದೆ.
ಈತನ ಸಹೋದರ ಹರ್ಷಿತ್ ಮೇ 5ರಂದು ಬೆಳಗಿನಜಾವ 2.30 ಗಂಟೆಗೆ ಮನೆಗೆ ಬಂದಾಗ ಮನೆಯ ಬಾಗಿಲು ತೆರೆದಿದ್ದು, ಒಳಗೆ ಹೋಗಿ ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.