ಕೊರಟಗೆರೆ: ಮರದಿಂದ ಬಿದ್ದು ಕೂಲಿ ಕಾರ್ಮಿಕ ಸಾವು
ಕೊರಟಗೆರೆ: ಹಲಸಿನಕಾಯಿ ಕೀಳಲು ಮರ ಹತ್ತಿದ ಕೂಲಿ ಕಾರ್ಮಿಕ ಮರದಿಂದ ಕಾಲು ಜಾರಿ ಕೆಳಗೆ ಬಿದ್ದು ಸಾವನ್ನಪ್ಪಿದ ಘಟನೆ ಕೋಳಾಲ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಹುಳಸೊಪ್ಪಿನಹಳ್ಳಿ ಗ್ರಾಮದ ವೆಂಕಟಶಾಮಯ್ಯ ಮಗನಾದ ಮಧುಸೂಧನ್ ಮೃತ ವ್ಯಕ್ತಿ. ತಾಲೂಕಿನ ನೀಲಗೊಂಡನಹಳ್ಳಿ ಗ್ರಾ.ಪಂ. ವ್ಯಾಪ್ತಿಯ ಅಳಾಲ ಸಂದ್ರ ಗ್ರಾಮದ ತೋಟವೊಂದರ ಹಲಸಿನ ಮರದಿಂದ ಕಾಲು ಜಾರಿ ಬಿದ್ದಿದ್ದು ಮೃತಪಟ್ಟಿದ್ದಾರೆ.




