ರಾಜ್ಯಕ್ಕೆ ದ್ವಿತೀಯ ಸ್ಥಾನ ಗಳಿಸಿದ ಬೆಳ್ತಂಗಡಿಯ ಚಿನ್ಮಯ್
ಬೆಳ್ತಂಗಡಿ: ಇಲ್ಲಿನ ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯ ಚಿನ್ಮಯ್ ಜಿ.ಕೆ. (624) ಅಂಕಗಳೊಂದಿಗೆ ರಾಜ್ಯಕ್ಕೆ ದ್ವಿತೀಯ ಸ್ಥಾನ ಗಳಿಸಿದ್ದಾರೆ.
ಅವರಿಗೆ ವಿಜ್ಞಾನದಲ್ಲಿ 99 ಅಂಕ ಸಿಕ್ಕಿದ್ದು ಉಳಿದ ಎಲ್ಲಾ ವಿಷಯಗಳಲ್ಲಿ ಪೂರ್ಣ ಅಂಕಗಳು ದೊರೆತಿವೆ.
ಬೆಳ್ತಂಗಡಿ ಜೂನಿಯರ್ ಕಾಲೇಜಿನ ಉಪನ್ಯಾಸಕ ಗಣೇಶ ರಾಮಚಂದ್ರ ಭಟ್ ಹಾಗೂ ಸರಕಾರಿ ಹೈಸ್ಕೂಲ್ ಶಿಕ್ಷಕಿ ಮಾಲಿನಿ ಹೆಗಡೆ ಅವರ ಪುತ್ರ ಚಿನ್ಮಯ್.




