ಕಾರ್ಖಾನೆಯ ನೀರಿನ ಹೊಂಡದಲ್ಲಿ ಬಿದ್ದು ಮೂವರು ಕಾರ್ಮಿಕರು ಮೃತ್ಯು
ಬಳ್ಳಾರಿ: ಜಿಲ್ಲೆಯ ಸಂಡೂರು ತಾಲೂಕಿನ ತೋರಣಗಲ್ಲು ಬಳಿ ಇರುವ ಜಿಂದಾಲ್ ಉಕ್ಕಿನ ಕಾರ್ಖಾನೆಯ ನೀರಿನ ಹೊಂಡದಲ್ಲಿ ಬಿದ್ದು ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ.
ಭುವನಹಳ್ಳಿ ಮೂಲದ ಜೆಡೆಪ್ಪ, ಬೆಂಗಳೂರು ಮೂಲದ ಸುಶಾಂತ, ಚೆನೈ ಮೂಲದ ಮಹಾದೇವನ್ ಮೃತಪ್ಟ ದುರ್ದೈವಿಗಳು.
ನೀರಿನ ಹೊಂಡಕ್ಕೆ ಜೋಡಿಸಲಾಗಿದ್ದ ಪೈಪ್ನಲ್ಲಿ ಸಮಸ್ಯೆ ಕಂಡು ಬಂದು ರಿಪೇರಿ ಮಾಡಲು ಮೂವರು ಹೋಗಿದ್ದಾರೆ. ಪೈಪ್ನಲ್ಲಿ ಬರುತ್ತಿದ್ದ ನೀರನ್ನು ನಿಲ್ಲಿಸದೆ ಹಾಗೆ ದುರಸ್ತಿ ಕಾರ್ಯ ಮಾಡುವಾಗ, ನೀರಿನ ರಭಸಕ್ಕೆ ಚನ್ನೈ ಮೂಲದ ಮಹಾದೇವನ್ ನೀರಿನ ಹೊಂಡದಲ್ಲಿ ಬಿದ್ದಿದ್ದಾನೆ.




