ಪುತ್ತೂರು: ಸಿಡಿಲು ಬಡಿದು ಕಾರ್ಮಿಕ ಸಾವು
ಪುತ್ತೂರು: ಸಿಡಿಲು ಬಡಿದು ಮರಳುಗಾರಿಕೆ ಮಾಡುತ್ತಿದ್ದ ಕಾರ್ಮಿಕನೊಬ್ಬ ಸಾವನಪ್ಪಿದ ಘಟನೆ ಕಡಬ ತಾಲೂಕಿನ ಇಚ್ಲಂಪಾಡಿಯಲ್ಲಿ ನಡೆದಿದೆ.
ಮೃತರನ್ನು ಉತ್ತರ ಪ್ರದೇಶ ಚೈನ್ಪುರ್ ಮೂಲದ ಶ್ರೀಕಿಶುನ್ ಎಂದು ಗುರುತಿಸಲಾಗಿದೆ.
ಕಡಬ ತಾಲೂಕಿನ ಇಚ್ಲಂಪಾಡಿಯಲ್ಲಿ ನದಿ ಬದಿಯಲ್ಲಿ ಮರಳುಗಾರಿಕೆ ಮಾಡುತ್ತಿದ್ದ ಉತ್ತರಪ್ರದೇಶದ ಕಾರ್ಮಿಕರು ಇದ್ದ ಶೆಡ್ ಗೆ ಸಿಡಿಲು ಬಡಿದಿದೆ. ಈ ವೇಳೆ ಓರ್ವ ಸಾವನಪ್ಪಿದವರೆ ಮತ್ತೆ ಇಬ್ಬರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಮಂಗಳೂರಿಗೆ ಕರೆತರಲಾಗಿದೆ.




