ಶಿವಮೊಗ್ಗ: ಕೊಲೆ ಪ್ರಕರಣದ ಆರೋಪಿಯ ಕಾಲಿಗೆ ಗಂಡೇಟು
ಶಿವಮೊಗ್ಗ: ಕೊಲೆ ಪ್ರಕರಣದ ಆರೋಪಿ ಶೋಯೆಬ್ ಕಾಲಿಗೆ ಶಿವಮೊಗ್ಗ ಗ್ರಾಮಾಂತರ ಠಾಣೆ ಪಿಎಸ್ಐ ರವಿ ಗುಂಡು ಹೊಡೆದು ಬಂಧಿಸಿದ್ದಾರೆ.
ಕಳೆದ ಬುಧವಾರ ಮೇ 8 ರಂದು ಶಿವಮೊಗ್ಗ ನಗರದಲ್ಲಿ ಎರಡು ಗ್ಯಾಂಗ್ ಮಧ್ಯೆ ಗಲಾಟೆ ನಡೆದಿತ್ತು.
ಗಲಾಟೆಯಲ್ಲಿ ಇಬ್ಬರು ರೌಡಿಗಳನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿಲಾಗಿತ್ತು. ಇನ್ನು ಗಲಾಟೆಯಲ್ಲಿ ಗಾಯಗೊಂಡಿದ್ದ ರೌಡಿ ಯಾಸೀನ್ ಖುರೇಶಿ ಘಟನೆ ನಡೆದ ಮರುದಿನ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟನು. ಈ ತ್ರಿಬಲ್ ಮರ್ಡರ್ ಘಟನೆಯಿಂದ ಶಿವಮೊಗ್ಗ ನಗರವು ಬೆಚ್ಚಿಬಿದ್ದಿದೆ.





