March 17, 2026

ಪುತ್ತೂರು ಶಾಸಕರ ಕಚೇರಿಗೆ ಬೀಗ ಜಡಿದ ಅಧಿಕಾರಿಗಳು

0
image_editor_output_image-1910671-1715750312478.jpg

ಪುತ್ತೂರು: ಲೋಕಸಭಾಚುನಾವಣ ನೀತಿ ಸಂಹಿತೆಯನ್ನು ಉಲ್ಲಂಘಿಸಿ ಶಾಸಕರ ಕಚೇರಿ ಸಭಾಂಗಣದಲ್ಲಿ ಶಾಸಕರ ಉಪಸ್ಥಿತಿ ಯಲ್ಲಿ ಜಲಸಿರಿ ಅಧಿಕಾರಿಗಳ ಸಭೆ ನಡೆಯುತ್ತಿರುವ ಬಗ್ಗೆ ಮಾಹಿತಿ ಪಡೆದ ಚುನಾವಣ ಅಧಿಕಾರಿ ತಹಶೀಲ್ದಾರ್‌ ನೇತೃತ್ವದ ತಂಡ ಸ್ಥಳಕ್ಕೆ ದಾಳಿ ನಡೆಸಿ ಸಭೆ ನಿಲ್ಲಿಸಿ ಕಚೇರಿಗೆ ಬೀಗ ಜಡಿದ ಘಟನೆ ಮೇ 13ರಂದು ಸಂಭವಿಸಿದೆ.

ಕಳೆದ 15 ದಿನಗಳಿಂದ ಕುಡಿಯುವ ನೀರಿನ ಸಮಸ್ಯೆ ತೀವ್ರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರ ದೂರಿನ ಅನ್ವಯ ಶಾಸಕ ಅಶೋಕ್‌ ಕುಮಾರ್‌ ರೈ ನೇತೃತ್ವದಲ್ಲಿ ಸೋಮವಾರ ಬೆಳಗ್ಗೆ ನಗರಸಭಾ ಕಟ್ಟಡದ ಶಾಸಕರ ಸಭಾಂಗಣದಲ್ಲಿ ಜಲಸಿರಿ ಅಧಿಕಾರಿಗಳ ಸಭೆ ಕರೆಯಲಾಗಿತ್ತು.

Leave a Reply

Your email address will not be published. Required fields are marked *

You may have missed

error: Content is protected !!