ಕಾರವಾರ: ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ
ಕಾರವಾರ: ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾಗಿ ನೀರುಪಾಲಾಗುತಿದ್ದ ನಲವತ್ತು ಜನ ಪ್ರವಾಸಿಗರನ್ನು ಕರಾವಳಿ ಕಾವಲು ಪಡೆ ಹಾಗೂ ಸ್ಥಳೀಯ ರಕ್ಷಣಾ ತಂಡ ರಕ್ಷಣೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ ನಡೆದಿದೆ.
ಮೂಡಂಗಿಯ ಗಣೇಶ, ರಮೇಶ ಎನ್ನುವವರಿಗೆ ಸೇರಿದ ಪ್ರವಾಸಿ ಬೋಟ್ ಇದಾಗಿದ್ದು, ಪ್ರವಾಸೋದ್ಯಮ ಇಲಾಖೆಯ ಅನುಮತಿ ಇಲ್ಲದೇ 28 ಜನರನ್ನು ಕರೆದೊಯ್ಯುವ ಬದಲು 40 ಜನರನ್ನು ಕರೆದೊಯ್ದಿದ್ದಾರೆ.




