ಬೆಳ್ತಂಗಡಿ: ಪೋಲಿಸ್ ಠಾಣೆಗೆ ನುಗ್ಗಿ ಗೂಂಡಾಗಿರಿ: ಬಂಧನಕ್ಕಾಗಿ ಶಾಸಕ ಹರೀಶ್ ಪೂಂಜ ಮನೆಯಲ್ಲಿ ಮೊಕ್ಕಾಂ ಹೂಡಿದ ಪೊಲೀಸರು
ಬೆಳ್ತಂಗಡಿ : ಪೋಲಿಸ್ ಠಾಣೆಗೆ ನುಗ್ಗಿ ಗೂಂಡಾಗಿರಿ ಮಾಡಿದ ಪ್ರಕರಣ ಹಾಗೂ ಅನುಮತಿ ಇಲ್ಲದೆ ಬಿಜೆಪಿಯಿಂದ ಪ್ರತಿಭಟನಾ ಸಭೆ ನಡೆಸಿದ ಬಗ್ಗೆ ಬೆಳ್ತಂಗಡಿ ಶಾಸಕ ಹರೀಶ್ ವಿರುದ್ಧ ಈಗ ಪ್ರತ್ಯೇಕವಾಗಿ ಎರಡು ಪ್ರಕರಣ ದಾಖಲಾಗಿದೆ.
ಎರಡೂ ಪ್ರಕರಣಗಳು ಜಾಮೀನು ರಹಿತ ಪ್ರಕರಣವಾಗಿದ್ದು ಇದೀಗ ಹರೀಶ್ ಪೂಂಜ ಬಂಧನಕ್ಕಾಗಿ ಸರ್ಕಲ್ ಇನ್ಸೆಕ್ಟರ್ ಸುಬ್ಬಪೂರ್ ಮರ್ ಮತ್ತು ಪಿಎಸ್ಐ ಚಂದ್ರಶೇಖರ್ ಪೂಂಜ ಮನೆಗೆ ಆಗಮಿಸಿದ್ದಾರೆ.




