ಚಿಕ್ಕಮಗಳೂರು: ಕೆರೆಗೆ ಉರುಳಿ ಬಿದ್ದ ಕಾರು: ಕಾರಿನಲ್ಲಿದ್ದ ಓರ್ವ ಸಾವು
ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ಕೆರೆಗೆ ಉರುಳಿ ಬಿದ್ದ ಪರಿಣಾಮ ಕಾರಿನಲ್ಲಿದ್ದ ಓರ್ವ ಸಾವಿಗೀಡಾಗಿದ ಘಟನೆ ಅಂಬಳೆ ಗ್ರಾಮದಲ್ಲಿ ನಡೆದಿದೆ. ಅಪಘಾತದಲ್ಲಿ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಮೃತನನ್ನು ಗ್ರಾಮದ ದಿನೇಶ್ ಎಂದು ಗುರುತಿಸಲಾಗಿದೆ. ಕಾರಿನಲ್ಲಿ ಚಿಕ್ಕಮಗಳೂರಿಗೆ ಹೋಗಿ ಗ್ರಾಮಕ್ಕೆ ವಾಪಸ್ ಆಗುವ ವೇಳೆ ಈ ಅಪಘಾತ ಸಂಭವಿಸಿದೆ. ಈ ವೇಳೆ ಕಾರಿನ ಒಳಗೆ ನೀರು ತುಂಬಿದ್ದು ಒಳಗಿದ್ದ ಚಾಲಕ ಕೋಡಲೇ ಹೊರಗೆ ಬಂದಿದ್ದು, ಮತ್ತೋರ್ವನಿಗೆ ಹೊರಗೆ ಬರಲು ಸಾಧ್ಯವಾಗದೆ ಮೃತಪಟ್ಟಿದ್ದಾನೆ.ಇ




