ಉಡುಪಿ: ಹೃದಯಾಘಾತದಿಂದ ಕಾರ್ತಿಕ್ ಪೂಜಾರಿ ಸಾವು
ಶಿರ್ವ: ಶಂಕರಪುರ ಸಮೀಪದ ಸರ್ಕಾರಿಗುಡ್ಡೆ ನಿವಾಸಿ ಕಾರ್ತಿಕ್ ಪೂಜಾರಿ(18ವ)ಶುಕ್ರವಾರ ಬೆಳಗಿನ ಜಾವ ಹೃದಯ ಸ್ತಂಭನದಿಂದ ನಿಧನ ರಾದರು.
ಅವರಿಗೆ ಹೃದಯ ಸಂಬಂಧಿ ಸಮಸ್ಯೆ ಇತ್ತು. ಇವರು ಕಾಪು ಮತ್ತು ಕಟಪಾಡಿ ವಲಯದ ಕಟ್ಟಡ ಸಾಮಾಗ್ರಿ ಸಾಗಾಟ ಲಾರಿ, ಟೆಂಪೋ ಮಾಲಕರ ಸಂಘದ ಅಧ್ಯಕ್ಷ, ಸಮಾಜಸೇವಕ ಚಂದ್ರ ಪೂಜಾರಿ ಹಾಗೂ ಕಟಪಾಡಿ ಗ್ರಾಮ ಪಂಚಾಯತ್ ಸದಸ್ಯೆ ಶಾಲಿನಿಚಂದ್ರ ದಂಪತಿಗಳ ಪುತ್ರ.




