ಕರಾವಳಿ ಭಾಗದಲ್ಲಿ ಸಾಧಾರಣ ಮಳೆ: ಕಲ್ಲಡ್ಕ ಪೇಟೆ ಕೆಸರುಮಯ
ಕಲ್ಲಡ್ಕ: ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಕಲ್ಲಡ್ಕ ಪೇಟೆ ಕೆಸರುಮಯವಾಗಿದೆ.
ಮಂಗಳೂರು ಬೆಂಗಳೂರು ಸಂಪರ್ಕದ ಪ್ರಮುಖ ಮಾರ್ಗವಾದ ಕಲ್ಲಡ್ಕದಲ್ಲಿ ಸಿಂಗಲ್ ರೋಡ್ ಕೂಡ ಟ್ರಾಫಿಕ್ ಜಾಮ್ ಆಗುತ್ತಿದೆ. ಮಳೆ ಬಂದ ಕೂಡಲೇ ರಸ್ತೆ ಹೊಳೆಯಂತಾಗುತ್ತದೆ. ನೀರು ಹರಿದುಹೋಗಲು ಯಾವುದೇ ವ್ಯವಸ್ಥೆ ಕಲ್ಪಿಸದೇ ಇರುವುದು ಇದಕ್ಕೆ ಕಾರಣ ಹಾಗೂ ರಸ್ತೆ ಸಮಸ್ಯೆ ಉಂಟಾಗುತ್ತದೆ ಎಂದು ಮೊದಲೇ ಗೊತ್ತಿದ್ದರೂ ಸಾಕಷ್ಟು ಮುಂಜಾಗರೂಕತೆಯನ್ನು ಮಾಡದೇ ಇರುವುದು ಇದಕ್ಕೆ ಕಾರಣ ಎಂದು ಸಾರ್ವಜನಿಕರು ಆಡಿಕೊಳ್ಳುವಂತಾಗಿದೆ.




