February 4, 2026

ಉಡುಪಿ: ನಡು ರಸ್ತೆಯಲ್ಲಿ ಗ್ಯಾಂಗ್ ವಾರ್ ಪ್ರಕರಣ: ಮತ್ತೆ ಮೂವರನ್ನು ಬಂಧಿಸಿದ ಪೊಲೀಸರು

0
image_editor_output_image-1589274686-1716616493974.jpg

ಉಡುಪಿ: ಉಡುಪಿ-ಮಣಿಪಾಲ ರಾಷ್ಟ್ರೀಯ ಹೆದ್ದಾರಿಯ ಕುಂಜಿಬೆಟ್ಟು ಎಂಬಲ್ಲಿ ಮೇ 18ರಂದು ನಡು ರಸ್ತೆಯಲ್ಲಿಯೇ ಗರುಡ ಗ್ಯಾಂಗ್ ಮಧ್ಯೆ ನಡೆದ ಗ್ಯಾಂಗ್‌ವಾರ್‌ ಗೆ ಸಂಬಂಧಿಸಿ ಮತ್ತೆ ಮೂವರು ಆರೋಪಿಗಳನ್ನು ಉಡುಪಿ ನಗರ ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಬಂಧಿತರ ಸಂಖ್ಯೆ ಆರಕ್ಕೇರಿದೆ.

ಈ ಪ್ರಕರಣದಲ್ಲಿ ಮೇ 20ರಂದು ಪ್ರಮುಖ ಆರೋಪಿ ಕಾಪು ಕೊಂಬಗುಡ್ಡೆ ಮೂಲದ ಆಶಿಕ್ (26), ತೋನ್ಸೆ ಹೂಡೆಯ ರಾಕೀಬ್ (21) ಹಾಗೂ ಮೇ 25ರಂದು ಸಕ್ಲೈನ್ (26) ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.

ಇದೀಗ ಕಾರ್ಯಾಚರಣೆ ತೀವ್ರಗೊಳಿಸಿದ ಪೊಲೀಸರು ಮತ್ತೆ ಮೂವರನ್ನು ಬಂಧಿಸಿದ್ದಾರೆ ಎಂದು ಉನ್ನತ ಅಧಿಕಾರಿಗಳು ತಿಳಿಸಿದ್ದಾರೆ.‌ ಬಂಧಿತ ಮೂವರಲ್ಲಿ ವಿಡಿಯೋದಲ್ಲಿ ಕಾಣುವ ಕಾರು ಢಿಕ್ಕಿ ಹೊಡೆದು ಗಾಯಗೊಂಡ ಶರೀಫ್ ಎಂಬಾತ ಕೂಡ ಇದ್ದಾನೆ. ಈತನಿಗೆ ಗಾಯಗಳಾಗಿದ್ದು, ಈಗಾಗಲೇ ಚಿಕಿತ್ಸೆ ಪಡೆದುಕೊಂಡಿದ್ದಾನೆ ಎಂದು ಮೂಲಗಳು ತಿಳಿಸಿವೆ.

ಆರೋಪಿಗಳ ಪ್ಯೆಕಿ ಕೆಲವರನ್ನು ರವಿವಾರ ಸ್ಥಳ ಮಹಜರು ಮಾಡಲಾಯಿತು. ನಗರ ಠಾಣೆಯ ಪೊಲೀಸರು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *

You may have missed

error: Content is protected !!