ಚಿಕ್ಕಮಗಳೂರು: ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ
ಚಿಕ್ಕಮಗಳೂರ: ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಹಳುವಳ್ಳಿ ತಾರಿಕೊಂಡದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿದ ವಿದ್ಯಾರ್ಥಿ ಹಳುವಳ್ಳಿ ತಾರಿಕೊಂಡ ನಿವಾಸಿ ರಮ್ಯಾ (21) ಎಂದು ಗುರುತಿಸಲಾಗಿದೆ.
ನಿನ್ನೆ ರಮ್ಯಾ ಖುಷಿ ಖುಷಿಯಾಗಿ ಮನೆಯಲ್ಲಿ ತನ್ನ ಬರ್ತಡೇ ಆಚರಿಸಿಕೊಂಡಿದ್ದಳು. ಆದರೆ ನಿನ್ನೆಯಷ್ಟೇ ಹುಟ್ಟುಹಬ್ಬ ಆಚರಿಸಿಕೊಂಡಿದ್ದ ರಮ್ಯಾ ಇಂದು ಸಾವಿಗೆ ಶರಣಾಗಿದ್ದಾಳೆ. ಈಕೆ ಕಳಸ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತಿಮ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದಳು ಎನ್ನಲಾಗಿದೆ.




