September 8, 2024

ಬಿಜೆಪಿ ಸಂಸದ ಬೆಂಗಾವಲು ಪಡೆಯ ಕಾರಿಗೆ ಬೈಕ್‌ಗೆ ಢಿಕ್ಕಿ: ಇಬ್ಬರು ಯುವಕರು ಸಾವು

0

ಲಕ್ನೋ: ಬಿಜೆಪಿ ಸಂಸದ ಬ್ರಿಜ್‌ ಭೂಷಣ್‌ ಅವರ ಪುತ್ರ ಕರಣ್‌ ಭೂಷಣ್‌ ಸಿಂಗ್‌ ಅವರ ಬೆಂಗಾವಲು ಪಡೆಗೆ ಸೇರಿದ ಟೊಯೊಟಾ ಫಾರ್ಚುನರ್ ಎಸ್‌ಯುವಿ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ 17 ವರ್ಷದ ಓರ್ವ ಸೇರಿದಂತೆ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಗೋಂಡಾದಲ್ಲಿ ನಡೆದಿದೆ.

ಬುಧವಾರ (ಇಂದು) ಬೆಳಗ್ಗೆ 9 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ರೇಹಾನ್‌ (17) ಮತ್ತು ಶಹಜಾನ್‌ (24) ಎಂಬ ಯುವಕರು ಔಷಧಿ ಖರೀದಿಸಲು ಬೈಕ್‌ ನಲ್ಲಿ ಹೋಗುತ್ತಿದ್ದರು.

ಈ ವೇಳೆ ಎದುರಿನಿಂದ ವೇಗವಾಗಿ ಬಂದ ಎಸ್‌ಯುವಿ ಡಿಕ್ಕಿ ಹೊಡೆದಿದೆ. ಬಳಿಕ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಓರ್ವ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಅಪಘಾತ ಸಂಭವಿಸಿದ ಕೂಡಲೇ ಜನರು ಜಮಾಯಿಸಿದ್ದರಿಂದ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ ಮೃತರ ತಾಯಿ ಚಂದಾ ಬೇಗಂ ಎಂಬವರು ದೂರು ದಾಖಲಿಸಿದ್ದು, ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!