December 15, 2025

ಪೊಲೀಸರು ಭಯೋತ್ಪಾದಕರನ್ನು ಹಿಡಿದು ತಂದರೆ, ಆಗಲೂ ಪೊಲೀಸ್ ಠಾಣೆಗೆ ನುಗ್ತಿರಾ?: ಶಾಸಕ ಹರೀಶ್ ಪೂಂಜಾನನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

0
image_editor_output_image-1472894031-1717147432270.jpg

ಮಂಗಳೂರು: ಭಯೋತ್ಪಾದಕರನ್ನು ಪೊಲೀಸರು ಹಿಡಿದು ತಂದರೆ, ಆಗಲೂ ಪೊಲೀಸ್ ಠಾಣೆಗೆ ನುಗ್ತಿರಾ? ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾನನ್ನು ತರಾಟೆಗೆ ತೆಗೆದುಕೊಂಡ ಹೈ ಕೋರ್ಟ್ ಪೊಲೀಸರನ್ನು ಪ್ರಶ್ನೆ ಮಾಡುವಿರಾ? ಇದನ್ನೆಲ್ಲಾ ಒಪ್ಪಲು ಆಗುವುದಿಲ್ಲ ಎಂದು ಹೇಳಿದೆ.

ಪೊಲೀಸ್ ಠಾಣೆಗೆ ನುಗ್ಗಿ ಪೊಲೀಸರನ್ನು ನಿಂದಿಸಿ, ಬೆದರಿಕೆ ಹಾಕಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದ ಘಟನೆಗೆ ಸಂಬಂಧಿಸಿದಂತೆ ಹರೀಶ್ ಪೂಂಜಾ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು.

ಈ ಎಫ್‌ಐಆರ್ ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಪೀಠ, ಶಾಸಕರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದೆ. ಪೊಲೀಸ್ ಠಾಣೆಗೆ ಏಕೆ ಹೋಗಿದ್ದು? ಶಾಸಕರಾದ ಮಾತ್ರಕ್ಕೆ ಠಾಣೆಗೆ ಹೋಗಿ ಪೊಲೀಸರ ಕೆಲಸಕ್ಕೆ ಅಡ್ಡಿಪಡಿಸಬಹುದೇ? ಎಂದು ಪ್ರಶ್ನಿಸಿದೆ.

ನಾಳೆ ನ್ಯಾಯಾಧೀಶರು ಹೇಗೆ ಕೆಲಸ ಮಾಡುತ್ತಿದ್ದಾರೆ ಎಂದು ನೋಡಲು ಕೋರ್ಟ್ ಬಂದು ನಮ್ಮ ಮುಂದೆ ಕುಳಿತರೆ ಹೇಗೆ? ಆಗ ಏನು ಮಾಡುವುದು? ಶಾಸಕರು ಇರೋದು ಶಾಸನ ರೂಪಿಸಲು. ಅದರಂತೆ ಶಾಸನ ರಚನೆ ಮಾಡುವುದಕ್ಕೆ ತಮ್ಮದೇ ಆದ ಕೊಡುಗೆ ನೀಡಬೇಕು. ಹೊರತುಪಡಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವುದಲ್ಲ ಎಂದು ಪೀಠ ತಿಳಿಸಿದೆ.

Leave a Reply

Your email address will not be published. Required fields are marked *

You may have missed

error: Content is protected !!