ಬೆಳ್ತಂಗಡಿ: ಹಳೇಕೋಟೆ ಸಮೀಪ ಟಿಪ್ಪರ್, ಬೈಕ್ ನಡುವೆ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

ಬೆಳ್ತಂಗಡಿ: ಬೆಳ್ತಂಗಡಿ ಹಳೇಕೋಟೆ ಸಮೀಪ ಪೆಟ್ರೋಲ್ ಪಂಪು ಬಳಿ ಟಿಪ್ಪರ್ ಹಾಗೂ ಬೈಕ್ ನಡುವೆ ಭೀಕರ ರಸ್ತೆ ಅಪಘಾತ ನಡೆದಿದೆ.
ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಮೃತಪಟ್ಟ ಘಟನೆ ಜೂ.1 ರಂದು ಮಧ್ಯಾಹ್ನ ನಡೆದಿದೆ.
ಬೈಕ್ ಸವಾರ ಬೆಳ್ತಂಗಡಿಯಿಂದ ಗುರುವಾಯನಕೆರೆ ಕಡೆ ಹೋಗುತ್ತಿದ್ದು ಟಿಪ್ಪರ್ ಸವಾರ ಟಿಪ್ಪರ್ ರಿವರ್ಸ್ ತೆಗೆಯುವ ಸಂದರ್ಭ ಈ ಘಟನೆ ನಡೆದಿದೆ.
ಬೈಕ್ ಟಿಪ್ಪರ್ ನ ಟಯರ್ನ ಅಡಿಗೆ ಸಲುಕಿಕೊಂಡು ನುಜ್ಜುಗುಜ್ಜಾಗಿದ್ದ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸಿದರೂ ಆವೇಳೆಗೆ ಆತ ಮೃತಪಟ್ಟಿದ್ದ. ಮೃತ ಬೈಕ್ ಸವಾರನ ಬಗ್ಗೆ ಇನ್ನಷ್ಟೆ ಮಾಹಿತಿ ತಿಳಿದುಬರಬೇಕಾಗಿದೆ.
ಬೆಳ್ತಂಗಡಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.