ಬೆಳ್ತಂಗಡಿ: ಅಪ್ರಾಪ್ತೆ ಬಾಲಕಿಯ ಮಾನಭಂಗ ಯತ್ನ, ಬೆಳ್ತಂಗಡಿ ಬಿಜೆಪಿ ಎಸ್ಟಿ ಮೋರ್ಚಾದ ಅಧ್ಯಕ್ಷನ ವಿರುದ್ಧ FIR
ಬೆಳ್ತಂಗಡಿ: ಗಲಾಟೆ ವೇಳೆ ಅಪ್ರಾಪ್ತೆ ಬಾಲಕಿ ಮೇಲೆ ಮಾನಭಂಗ ಯತ್ನಿಸಿದ್ದಾನೆ ಎಂದು ಆರೋಪಿಸಿ ಬೆಳ್ತಂಗಡಿ ಬಿಜೆಪಿ ಮಂಡಲದ ಎಸ್ ಟಿ ಮೋರ್ಚಾದ ಅಧ್ಯಕ್ಷನ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳ್ತಂಗಡಿ ಕಳೆಂಜ ಗ್ರಾಮದ ನಿವಾಸಿ ಬೆಳ್ತಂಗಡಿ ಬಿಜೆಪಿ ಮಂಡಲದ ಎಸ್ ಟಿ ಮೋರ್ಚಾದ ಅಧ್ಯಕ್ಷ ರಾಜೇಶ್ ಎಮ್ ಕೆ ವಿರುದ್ಧ ಅಪ್ರಾಪ್ತ ಬಾಲಕಿ ಮೇಲೆ ಮಾನಭಂಗ, ಅವಾಚ್ಯ ಶಬ್ದಗಳಿಂದ ನಿಂದನೆ ಹಾಗೂ ಪೋಕ್ಸೋ ಅಡಿಯಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.




