ಟ್ರಕ್ಕಿಂಗ್ ತೆರಳಿದ್ದ ಕುಂದಾಪುರ ಮೂಲದ ಯುವಕ ಮೃತ್ಯು
ಕುಂದಾಪುರ: ಉತ್ತರಾಖಂಡದ ಸಹಸ್ತ್ರ ತಾಲ್ ಶಿಖರಕ್ಕೆ ಟ್ರಕ್ಕಿಂಗ್ ತೆರಳಿದ್ದ ವೇಳೆ ಹವಾಮಾನ ವೈಪರಿತ್ಯದಿಂದ ಉಂಟಾದ ದುರಂತದಲ್ಲಿ ಸಾವನಪ್ಪಿದ ಕರ್ನಾಟಕದ 9 ಮಂದಿಯಲ್ಲಿ ಕುಂದಾಪುರ ಮೂಲದ ಚಾರಣಿಗರೊಬ್ಬರು ಸೇರಿದ್ದಾರೆ.
ಕುಂದಾಪುರ ತಾಲೂಕಿನ ಕುಂಭಾಶಿ ಮೂಲದ ಪದ್ಮನಾಭ ಭಟ್ ಮೃತಪಟ್ಟವರು. ಚಾರಣಕ್ಕೆ ತೆರಳಿದ್ದ 22 ಜನರ ತಂಡದಲ್ಲಿ ಪದ್ಮನಾಭ ಭಟ್ ಕೂಡ ಇದ್ದರು. ಪದ್ಮನಾಭ ಭಟ್ ಅವರು ಮೂಲತಃ ಕುಂಭಾಶಿಯವರು. ಆದರೆ, ಇವರು ಬೆಂಗಳೂರಿನಲ್ಲಿ ವಾಸವಾಗಿದ್ದರು. ಮೇ 29ರಂದು 22 ಜನರ ತಂಡದೊಂದಿಗೆ ಉತ್ತರಕಾಶಿಯ ಸಹಸ್ತ್ರ ತಾಲ್ಗೆ ಚಾರಣಕ್ಕೆ ತೆರಳಿದ್ದರು. ಚಾರಣ ಮುಗಿಸಿ ಕೆಳಗೆ ಬರುವಾಗ ಹವಾಮಾನ ವೈಪರಿತ್ಯದಿಂದ ದುರ್ಘಟನೆ




