ರೌಡಿ ಶೀಟರ್ ಚೈಲ್ಡ್ ರವಿ ಕೊಲೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ
ಹಾಸನ: ರವಿಕುಮಾರ್ ಅಲಿಯಾಸ್ ಚೈಲ್ಡ್ ರವಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ರಂಗೋಲಿ ಹಳ್ಳದ ಪ್ರೀತಂ ಅಲಿಯಾಸ್ ಗುಂಡಿಪ್ರೀತು (27), ಕೀರ್ತಿ ಅಲಿಯಾಸ್ ಕಿರಿಕ್ ಕೀರ್ತಿ (26), ರಂಗನಾಥ್ ಅಲಿಯಾಸ್ ರಂಗ ಚೇತು (26) ಮತ್ತು ಅಮಿತ್ ಅಲಿಯಾಸ್ ಅಮ್ಮಿ (32) ಎಂದು ಗುರುತಿಸಲಾಗಿದೆ.
ಯಾವ ಕಾರಣಕ್ಕೆ ಕೊಲೆ ನಡೆದಿದೆ ಎಂಬ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತಾ ತಿಳಿಸಿದ್ದಾರೆ




