ಈ ಮಟ್ಟಿನ ಸೋಲು ನಿರೀಕ್ಷೆ ಮಾಡಿರಲಿಲ್ಲ: ಮಾಜಿ ಶಾಸಕ ಕೆ. ರಘುಪತಿ ಭಟ್ ಬೇಸರ
ಉಡುಪಿ: ಪದೇ ಪದೇ ಪಕ್ಷೇತರನಾಗಿ ನಿಲ್ಲುವ ಚಟ ಇಲ್ಲ. ಈ ಮಟ್ಟಿನ ಸೋಲು ನಿರೀಕ್ಷೆ ಮಾಡಿರಲಿಲ್ಲ ಎಂದು ಮಾಜಿ ಶಾಸಕ ಕೆ. ರಘುಪತಿ ಭಟ್ ಬೇಸರ ವ್ಯಕ್ತ ಪಡಿಸಿದ್ದಾರೆ.
ಸೋಲಿನಿಂದ ಓಡಿ ಹೋಗುವ ಪ್ರಶ್ನೆಯೇ ಇಲ್ಲ. ರಾಜಕೀಯ, ಸಾಮಾಜಿಕ ಕಾರ್ಯಕರ್ತನಾಗಿ ಸಮಾಜದೊಂದಿಗೆ ಇರುತ್ತೇನೆ ಎಂದು ಮಾಜಿ ಶಾಸಕ ಕೆ. ರಘುಪತಿ ಭಟ್ ಹೇಳಿದರು.
ವಿಧಾನ ಪರಿಷತ್ ನ ನೈಋತ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋಲು ಕಂಡಿದ್ದ ರಘುಪತಿ ಭಟ್ ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.




