February 3, 2026

ಬಂಟ್ವಾಳ: ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ: ಸವಾರ ಸ್ಥಳದಲ್ಲೇ ಮೃತ್ಯು

0
image_editor_output_image230215869-1717853989841

ಬಂಟ್ವಾಳ: ದ್ವಿಚಕ್ರವಾಹನಕ್ಕೆ ಲಾರಿ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಸಜೀಪ ಮುನ್ನೂರು ಗ್ರಾಮದ ಕಂದೂರು ಎಂಬಲ್ಲಿ ಸಂಜೆ ವೇಳೆ ನಡೆದಿದೆ.

ಅಮ್ಟಾಡಿ ಗ್ರಾಮದ ಕಲಾಯಿ ನಿವಾಸಿ ರಾಮನಾಯ್ಕ ( 47) ಮೃತಪಟ್ಟ ವ್ಯಕ್ತಿಯಾಗಿದ್ದಾರೆ.

ವೈಯಕ್ತಿಕ ಕೆಲಸದ ನಿಮಿತ್ತ ಇವರು ಸ್ಕೂಟರ್ ನಲ್ಲಿ ಮುಡಿಪುವಿಗೆ ಹೋಗಿ ವಾಪಸು ಬಿಸಿರೋಡಿನ ಕಡೆಗೆ ಸಂಚರಿಸುತ್ತಿದ್ದ ವೇಳೆ ಅತೀ ವೇಗ ಮತ್ತು ಅಜಾಗರೂಕತೆಯಿಂದ ಬಂದ ಲಾರಿ ಚಾಲಕ ಇವರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದಾನೆ.
ಡಿಕ್ಕಿಯ ರಭಸಕ್ಕೆ ಸ್ಕೂಟರ್ ಸವಾರ ರಸ್ತೆಗೆ ಎಳೆಯಲ್ಪಟ್ಟು ತಲೆಗೆ ಗಂಭೀರವಾದ ಏಟಾಗಿ ರಕ್ತಶ್ರಾವ ಉಂಟಾಗಿತ್ತು.

ರಸ್ತೆಯ ಮಧ್ಯ ಭಾಗಕ್ಕೆ ಎಸೆಯಲ್ಪಟ್ಟ ಇವರನ್ನು ಪೋಲೀಸರು ಸ್ಥಳಕ್ಕೆ ಬರುವವರೆಗೂ ಯಾರು ಮುಟ್ಟಿಲ್ಲ, ಸುಮಾರು ಅರ್ಧ ತಾಸಿನವರೆಗೂ ಇವರ ಮೃತದೇಹ ರಸ್ತೆಯ ಮಧ್ಯ ಭಾಗದಲ್ಲಿತ್ತು ಎಂದು ಹೇಳಲಾಗಿದೆ.
ಬಳಿಕ ಪೋಲೀಸರು ಸ್ಥಳಕ್ಕೆ ಆಗಮಿಸಿ ಮೃತದೇಹವನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಶಿಪ್ಟ್ ಮಾಡಲಾಗಿದೆ.

ರಾಮ ನಾಯ್ಕ ಅವರು ಕಳೆದ ಅನೇಕ ವರ್ಷಗಳಿಂದ ಬಂಟ್ವಾಳ ಬೈಪಾಸ್ ನಲ್ಲಿರುವ ಇಂಡಿಯನ್ ಆಯಿಲ್ ಪೆಟ್ರೋಲಿಯಂ ಪಂಪ್ ನಲ್ಲಿ ಮ್ಯಾನೇಜರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಪ್ರಾಮಾಣಿಕ ಕೆಲಸಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಇವರು ಗ್ರಾಹಕರ ಜೊತೆ ಉತ್ತಮ ಸಂಬಂಧವನ್ನು ಹೊಂದಿದ್ದರು ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಎಸ್.ಐ ಸುತೇಶ್ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!