February 3, 2026

ಉಳ್ಳಾಲ: ನೇಪಾಳ ಮೂಲದ ಅಪ್ರಾಪ್ತ ಬಾಲಕಿ ನೇಣು ಬಿಗಿದು ಆತ್ಮಹತ್ಯೆ

0
image_editor_output_image-621316151-1717909917497

ಉಳ್ಳಾಲ: ನೇಪಾಳ ಮೂಲದ ಅಪ್ರಾಪ್ತ ಬಾಲಕಿಯೊಬ್ಬಳು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಳ್ಳಾಲ ತೊಕ್ಕೊಟ್ಟು, ಚೆಂಬುಗುಡ್ಡೆಯ ಬಾಡಿಗೆ ಮನೆಯಲ್ಲಿ ಶನಿವಾರ ನಡೆದಿದೆ.

ನೇಪಾಳ ಮೂಲದ ರಬೀನ ಬಿ.ಕೆ (16)ಮೃತ ಅಪ್ರಾಪ್ತೆ.

ತೊಕ್ಕೊಟ್ಟು ವೃಂದಾವನ ಹೊಟೇಲಿನ ಪಕ್ಕದಲ್ಲಿ ಫಾಸ್ಟ್ ಫುಡ್ ಕಮ್ ಕ್ಯಾಂಟೀನ್ ನಡೆಸುತ್ತಿದ್ದ ನೇಪಾಳ ಮೂಲದ ರಾಮ್ ಶರಣ್ ಎಂಬವರು ತನ್ನ ಪತ್ನಿ ಮತ್ತು ನಾಲ್ಕು ಮಕ್ಕಳೊಂದಿಗೆ ತೊಕ್ಕೊಟ್ಟು, ಚೆಂಬುಗುಡ್ಡೆಯ ಬಾಡಿಗೆ ಮನೆಯೊಂದರಲ್ಲಿ ನೆಲೆಸಿದ್ದರು. ರಾಮ್ ಶರಣ್ ಅವರ ಎರಡನೇ ಮಗಳಾದ ರಬೀನ ನೇಪಾಳದಲ್ಲಿ ಎಂಟನೇ ತರಗತಿ ಓದುತ್ತಿದ್ದು, ಆಕೆಯನ್ನು ಮಂಗಳೂರಿನಲ್ಲೆ ಓದಿಸುವ ಸಲುವಾಗಿ ತಿಂಗಳ ಹಿಂದೆ ಪೋಷಕರು ತೊಕ್ಕೊಟ್ಟಿಗೆ ಕರೆ ತಂದಿದ್ದರು. ಆದರೆ ರಬೀನ ತಾನು ನೇಪಾಳದಲ್ಲೇ ಓದು ಮುಂದುವರಿಸುವುದಾಗಿ ಹಠ ಹಿಡಿದಿದ್ದು ಈ ಬಗ್ಗೆ ಪೋಷಕರಲ್ಲಿ ಗಲಾಟೆ ನಡೆಸುತ್ತಿದ್ದರೆಂದು ತಿಳಿದುಬಂದಿದೆ.

ಶನಿವಾರ ಮದ್ಯಾಹ್ನ ರಬೀನಳ ತಾಯಿ ರಮೀಲ ಅವರು ಚಿಕ್ಕ ಮಕ್ಕಳನ್ನ ಶಾಲೆಯಿಂದ ಮನೆಗೆ ಕರಕೊಂಡು ಬರುವ ವೇಳೆ ರಬೀನ ಮನೆಯ ಶೌಚಾಲಯದ ಕಬ್ಬಿಣದ ಸಲಾಕೆಗೆ ಚೂಡಿದಾರದ ಶಾಲಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ. ಬಳಿಕ ಉಳ್ಳಾಲ ಠಾಣಾ ಪೊಲೀಸರು ಮೃತ ದೇಹದ ಮರಣೋತ್ತರ ಪರೀಕ್ಷೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.

ಮೃತ ರಬೀನ ತಂದೆ, ತಾಯಿ, ಇಬ್ಬರು ಸಹೋದರಿಯರು, ಓರ್ವ ಸಹೋದರನನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!