ಮನೆಯಲ್ಲಿದ್ದ ನಗದು, ಚಿನ್ನಾಭರಣಗಳ ಕಳವು: ಆರೋಪಿಗಳ ಬಂಧನ
ಹುಣಸೂರು: ಮನೆಯಲ್ಲಿದ್ದ ಚಿನ್ನಾಭರಣಗಳನ್ನು ಕದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ತನ್ನ ದೊಡ್ಡಪ್ಪನ ಯಾರೂ ಇಲ್ಲದ ವೇಳೆ ಸ್ನೇಹಿತರೊಡಗೂಡಿ 3 ಲಕ್ಷ ನಗದು, 35 ಗ್ರಾಂ ಚಿನ್ನಾಭರಣ ಕದ್ದು ಪರಾರಿಯಾಗಿದ್ದ ಆರೋಪಗಳನ್ನು ಪೊಲೀಸರು ಬಂಧಿಸಿದ್ದಾರೆ.
1.27 ಲಕ್ಷ ನಗದು ಹಾಗೂ 1.40ಲಕ್ಷರೂ ಬೆಲೆ ಬಾಳುವ ಚಿನ್ನಾಭರಣ ವಶಪಡಿಸಿಕೊಳ್ಳುವಲ್ಲಿ ಬಿಳಿಕೆರೆ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.
ತಾಲೂಕಿನ ಉದ್ದೂರು ಗ್ರಾಮದ ಶಿವಣ್ಣೇಗೌಡರ ಪುತ್ರ ಮಂಜುನಾಥ, ಈತನ ಸ್ನೇಹಿತರಾದ ಸೂರ್ಯ ಅಲಿಯಾಸ್ ಸೂರಿ ಬಂಧಿತರು. ಇದೇ ಗ್ರಾಮದ ಅಜಯ್ ತಲೆ ಮರೆಸಿಕೊಂಡಿದ್ದಾನೆ.




