September 8, 2024

ಕಾಸರಗೋಡು: ಬೈಕ್, ಲಾರಿ ನಡುವೆ ಅಪಘಾತ: ಚೆಪ್ಪಿನಡ್ಕದ ಯುವಕ ಮೃತ್ಯು

0

ಕಾಸರಗೋಡು: ಬೈಕ್ ಹಾಗೂ ಲಾರಿ ನಡುವೆ ಉಂಟಾದ ಭೀಕರ ಅಪಘಾತದಲ್ಲಿ ಯುವಕನೋರ್ವ ಮೃತಪಟ್ಟ ಘಟನೆ ಕುಂಬಳೆ ಸಮೀಪದ ಆರಿಕ್ಕಾಡಿಯಲ್ಲಿ ನಡೆದಿದೆ .

ಕೊಡ್ಯಮ್ಮೆ ಚೆಪ್ಪಿನಡ್ಕದ ಅಸ್ಕರ್ (24) ಮೃತ ಪಟ್ಟವರು. ಸಹ ಸವಾರ ಅನಾಸ್ ಗಂಭೀರ ಗಾಯಗೊಂಡಿದ್ದು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಶುಕ್ರವಾರ ರಾತ್ರಿ ಕುಂಬಳೆ ಸೇತುವೆ ಬಳಿ ಮಂಗಳೂರಿನಿಂದ ಕಾಸರಗೋಡು ಕಡೆಗೆ ಬರುತ್ತಿದ್ದ ಲಾರಿ ಮತ್ತು ಎದುರಿನಿಂದ ಬರುತ್ತಿದ್ದ ಬೈಕ್‌ ನಡುವೆ ಈ ಅಪಘಾತ ನಡೆದಿದೆ.

ಗಂಭೀರ ಗಾಯಗೊಂಡ ಅಸ್ಕರ್ ನನ್ನು ಮಂಗಳೂರಿನ ಆಸ್ಪತ್ರೆಗೆ ಕೊಂಡೊಯ್ದು ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಕುಂಬಳೆ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!