ಮಡಿಕೇರಿ: ಪ್ರವಾಸಿಗರ ಮೇಲೆ ಬೈಕಿನಲ್ಲಿ ಬಂದ ವ್ಯಕ್ತಿಗಳಿಂದ ಹಲ್ಲೆ, ಚಿನ್ನದ ಸರ ಎಗರಿಸಿ ಪರಾರಿ
ಮಡಿಕೇರಿ: ಕೋಟೆಬೆಟ್ಟ ಪ್ರವಾಸಕ್ಕೆಂದು ಆಗಮಿಸಿದ ಪ್ರವಾಸಿಗರ ಮೇಲೆ ಬೈಕಿನಲ್ಲಿ ಬಂದ ಇಬ್ಬರು ಹಲ್ಲೆ ಮಾಡಿ ದೌರ್ಜನ್ಯ ಎಸಗಿರುವ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ.
ಮಕ್ಕಳು, ಮಹಿಳೆಯರು ಸೇರಿದಂತೆ ಪುತ್ತೂರಿನಿಂದ ಕುಟುಂಬವೊಂದು ಕೋಟೆಬೆಟ್ಟ ಪ್ರವಾಸಿ ತಾಣಕ್ಕೆ ಆಗಮಿಸಿದ ಸಂದರ್ಭ ಬೈಕಿನಲ್ಲಿ ಬಂದ ಇಬ್ಬರು ಪುಂಡರು ಹಲ್ಲೆ ನಡೆಸಿ, ಚಿನ್ನದ ಸರ ಎಗರಿಸಿ ಬೈಕನ್ನು ಬಿಟ್ಟು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ




