ಚಿನ್ಮಯಾನಂದ ಸ್ವಾಮೀಜಿ ಹತ್ಯೆ: ಆಶ್ರಮದ ಇಬ್ಬರು ಸ್ವಾಮೀಜಿಗಳ ಬಂಧನ
ಕೋಲಾರ: ಆನಂದ ಮಾರ್ಗದ ಆಚಾರ್ಯ ಚಿನ್ಮಯಾನಂದ ಸ್ವಾಮೀಜಿ ಹತ್ಯೆ ಹಿನ್ನೆಲೆ ಆಶ್ರಮದ ಇಬ್ಬರು ಸ್ವಾಮೀಜಿಗಳು ಸೇರಿದಂತೆ ಮೂವರನ್ನು ಮಾಲೂರು ಪೊಲೀಸರು ಬಂಧಿಸಿದ್ದಾರೆ.
ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ಮೈಲಾಂಡಹಳ್ಳಿ ಬಳಿಯ ಆನಂದ ಮಾರ್ಗ ಆಶ್ರಮದ ಆಚಾರ್ಯ ಚಿನ್ಮಯಾನಂದ ಸ್ವಾಮೀಜಿ (70) ಅವರನ್ನು ಶನಿವಾರ ಆಶ್ರಮದಲ್ಲಿಯೇ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು.
ಇದೇ ಆಶ್ರಮದ ಇಬ್ಬರು ಸ್ವಾಮೀಜಿಗಳು ಮತ್ತು ಮಾಜಿ ಸಿಬ್ಬಂದಿ ಸೇರಿದಂತೆ ಮೂವರನ್ನು ಕೊಲೆ ಆರೋಪದ ಮೇಲೆ ಬಂಧಿಸಲಾಗಿದೆ.




