March 17, 2026

ಉಳ್ಳಾಲ: ಬೈಕ್ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ

0
image_editor_output_image-516190666-1719284883460.jpg

ಉಳ್ಳಾಲ: ಬೈಕ್ ಕಳವು ನಡೆಸಿದ ಆರೋಪಿಗಳಿಬ್ಬರನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದು, ಬಂಧಿತರಿಂದ ತೊಕ್ಕೊಟ್ಟುವಿನಿಂದ ಕಳವು ನಡೆಸಿದ ಆಕ್ಟಿವಾ ಸ್ಕೂಟರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

ಮುಕ್ಕಚ್ಚೇರಿ ಕಡಪ್ಪುರ ನಿವಾಸಿ ಅಬ್ದುಲ್ ಸವಾದ್ (26) ಮತ್ತು ಧರ್ಮನಗರ ನಿವಾಸಿ ಯಶ್ಬಿತ್ (22) ಬಂಧಿತರು.

ಬಂಧಿತರಿಬ್ಬರು ಕೆಲ ದಿನಗಳ ಹಿಂದೆ ತೊಕ್ಕೊಟ್ಟು ಕೀರ್ತಿ ಹೊಟೇಲ್ ಎದುರುಗಡೆ ನಿಲ್ಲಿಸಿದ್ದ ಆಕ್ಟಿವಾ ಸ್ಕೂಟರನ್ನು ಕಳವು ನಡೆಸಿದ್ದರು. ಖಚಿತ ಮಾಹಿತಿ ಪಡೆದ ಉಳ್ಳಾಲ ಪೊಲೀಸರು ಆರೋಪಿಗಳಿಬ್ಬರನ್ನು ಉಳ್ಳಾಲದಿಂದ ಬಂಧಿಸಿದ್ದಾರೆ.

ಆರೋಪಿಗಳಲ್ಲಿ ಅಬ್ದುಲ್ ಸವಾದ್ ವಿರುದ್ಧ ಗಾಂಜಾ ಹಾಗೂ ಕಳವು ಪ್ರಕರಣಗಳು ಮಂಗಳೂರಿನ ವಿವಿಧ ಠಾಣೆಗಳಲ್ಲಿದೆ. ಯಶ್ಬಿತ್ ಉಳ್ಳಾಲ – ಸ್ಟೇಟ್ ಬ್ಯಾಂಕ್ ಬಸ್ಸಿನಲ್ಲಿ ನಿರ್ವಾಹಕನಾಗಿದ್ದಾನೆ.

ಠಾಣಾಧಿಕಾರಿ ಬಾಲಕೃಷ್ಣ ಹೆಚ್.ಎನ್ ನೇತೃತ್ವದಲ್ಲಿ ಆರೋಪಿಗಳನ್ನು ಬಂಧಿಸಲಾಗಿದ್ದು, ರೂ. 80,000 ಬೆಲೆ ಬಾಳುವ ಆಕ್ಟಿವಾ ಸ್ಕೂಟರನ್ನು ವಶಕ್ಕೆ ಪಡೆಯಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!