ಪಾಳು ಬಿದ್ದ ಬಾವಿಗೆ ಹಾರಿ ಪೊಲೀಸ್ ಕಾನ್ ಸ್ಟೇಬಲ್ ಆತ್ಮಹತ್ಯೆ
ಬೆಂಗಳೂರು: ಇಲ್ಲಿನ ಮಡಿವಾಳ ಪೊಲೀಸ್ ಕಾನ್ಸ್ಟೇಬಲ್ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿದೆ.
ಶಿವರಾಜ್ ಬೆಂಗಳೂರು ವಿವಿ ಒಳಗೆ ನಡೆದು ಬಂದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಹೀಗಾಗಿ ಬೆಂಗಳೂರು ವಿವಿ ಆವರಣದೊಳಗೆ ಹುಡುಕಾಡಿದ್ದ ಸಂದರ್ಭ ಆವರಣದ ಪಾಳು ಬಿದ್ದ ಬಾವಿಯಲ್ಲಿ ಶಿವರಾಜ್ ಮೃತದೇಹ ತೇಲುತ್ತಿರುವುದು ಪತ್ತೆಯಾಗಿದೆ.
ಕೂಡಲೇ ಜ್ಞಾನಭಾರತಿ ಪೊಲೀಸರಿಗೆ ಮಾಹಿತಿ ನೀಡಿದ್ದ ಪೊಲೀಸರು ಸ್ಥಳಕ್ಕೆ ಬಂದು ಮೃತದೇಹ ಹೊರತೆಗೆಸಿ ಮರಣೋತ್ತರ ಪರೀಕ್ಷೆಗೆ ರವಾನಿಸಿದರು.




