ಕರ್ನಾಟಕ ಭವನದ ನೌಕರ ಆತ್ಮಹತ್ಯೆ
ವಿಜಯನಗರ: ದೆಹಲಿಯ ಕರ್ನಾಟಕ ಭವನದ ನೌಕರ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಮಾರುತಿ (35) ಆತ್ಮಹತ್ಯೆಗೆ ಶರಣಾದ ನೌಕರ ಎಂದು ಗುರುತಿಸಲಾಗಿದೆ.
ಸಾವನ್ನಪ್ಪಿದ ಮಾರುತಿ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಎಂ.ಬಿ. ಅಯ್ಯನಹಳ್ಳಿ ಗ್ರಾಮದವರು. ಎರಡ್ಮೂರು ದಿನಗಳ ಹಿಂದೆ ದೆಹಲಿಯಿಂದ ಸ್ವಗ್ರಾಮಕ್ಕೆ ಆಗಮಿಸಿದ್ದರು. ಪತ್ನಿ ಮಕ್ಕಳನ್ನು ಪತ್ನಿಯ ತವರು ಮನೆಗೆ ಬಿಟ್ಟು ತಂದೆ, ತಾಯಿಯನ್ನು ನೋಡಿಕೊಂಡು ಬರುವೆ ಎಂದು ಅಯ್ಯನಹಳ್ಳಿಗೆ ಬಂದಿದ್ದರು.




