ಸುಳ್ಯದಲ್ಲಿ ರಾಜ್ಯ ಒಕ್ಕಲಿಗರ ಸಂಘದ ಚುನಾವಣೆ:
ಬಿರುಸಿನ ಮತದಾನ
ಸುಳ್ಯ: ಕುರುಂಜಿ ಸಹೋದರರ ಪ್ರತಿಷ್ಠಿತ ಕಣವಾಗಿ ಮಾರ್ಪಟ್ಟಿರುವ ರಾಜ್ಯ ಒಕ್ಕಲಿಗರ ಸಂಘದ ಚುನಾವಣೆ ಇಂದು ನಡೆಯುತ್ತಿದ್ದು, ಬೆಳಗ್ಗೆ 7 ಗಂಟೆಗೆ ಬಿರುಸಿನ ಮತದಾನ ಆರಂಭಗೊಂಡಿದೆ.
ಸುಳ್ಯ ಸರಕಾರಿ ಜೂನಿಯರ್ ಕಾಲೇಜಿನ ಮತಗಟ್ಟೆಯಲ್ಲಿ ನೂರಾರು ಸಂಖ್ಯೆಯಲ್ಲಿ ಮತದಾರರು ಸೇರಿದ್ದಾರೆ. ಡಾಕ್ಟರ್ ಕೆ ವಿ ರೇಣುಕಾ ಪ್ರಸಾದ್ ಪರ ಮತ್ತು ಡಾ. ಕೆ ವಿ ಚಿದಾನಂದರ ಪರ ನೂರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಮತಯಾಚನೆಯಲ್ಲಿ ಜಮಾವಣೆಗೊಂಡಿದ್ದಾರೆ.
ಕುರುಂಜಿ ಸಹೋದರರ ಸವಾಲಾಗಿರುವ ಈ ಮತದಾನದಲ್ಲಿ ಯಾರು ಜಯಗಳಿಸುತ್ತಾರೆ ಎಂಬುವುದು ಸಾರ್ವಜನಿಕರಲ್ಲಿ ಕುತೂಹಲ ಮೂಡಿಸಿದೆ.






