May 5, 2026

ಉಳ್ಳಾಲ: ಚಿನ್ನಾಭರಣ ಕಳವು ಪ್ರಕರಣ: ಬೆಳ್ತಂಗಡಿಯ ಇಬ್ಬರು ಸಹಿತ ಐದು ಮಂದಿ ಆರೋಪಿಗಳ ಬಂಧನ

0
image_editor_output_image-1013150479-1720325087470

ಮಂಗಳೂರು: ಇಬ್ಬರು ಅಪ್ರಾಪ್ತರು ಹಾಗೂ ಮೂವರು ವಯಸ್ಕರು ಸೇರಿದಂತೆ ಉಳ್ಳಾಲದಲ್ಲಿ ಚಿನ್ನಾಭರಣ ಕಳವು ಪ್ರಕರಣದ ಆರೋಪಿಗಳನ್ನು ಪೊಲೀಸರು ಜುಲೈ 6ರ ಶನಿವಾರದಂದು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಗಳು ಬೆಳ್ತಂಗಡಿಯ ಶ್ರೇಯಸ್, ಉರ್ವದ ಪೃಥ್ವಿರಾಜ್ ಮತ್ತು ಬೆಳ್ತಂಗಡಿಯ ತೌಸಿಫ್ ಮತ್ತು ಇಬ್ಬರು ಅಪ್ರಾಪ್ತರು. ಮಂಗಳೂರಿನ ವಿವಿಧ ಜ್ಯುವೆಲ್ಲರಿ ಅಂಗಡಿಗಳಿಗೆ ಮಾರಾಟ ಮಾಡಿದ್ದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಶ್ರೇಯಸ್, ಪೃಥ್ವಿರಾಜ್ ಮತ್ತು ತೌಸಿಫ್‌ಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.ಪ್ರಕರಣದಲ್ಲಿ ಭಾಗಿಯಾಗಿರುವ ಅಪ್ರಾಪ್ತರ ಕುರಿತ ವರದಿಯನ್ನು ಬಾಲಾಪರಾಧಿ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ.

ಈ ಹಿಂದೆ ಜೂನ್ 28 ರಂದು ಉಳ್ಳಾಲ ಧರ್ಮನಗರದ ನಿವಾಸಿ ಶ್ರೀಧರ್ (65) ಎಂಬುವರು ತಮ್ಮ ಬೆಡ್‌ರೂಮ್ ಕಬೋರ್ಡ್‌ನಿಂದ ಸುಮಾರು 15 ಲಕ್ಷ ಮೌಲ್ಯದ ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಲಾಗಿದೆ ಎಂದು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಜೂನ್ 8 ರಂದು ಬೆಳಿಗ್ಗೆ 8 ಗಂಟೆ ಸಮಯ ಹಾಹೂ ಜೂನ್ 16 ರಂದು ಮಧ್ಯಾಹ್ನ 12 ಗಂಟೆ ವೇಳೆ ಕಳ್ಳತನ ನಡೆದಿದ್ದು, ಅವರ ದೂರಿನ ಮೇರೆಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೊಲೀಸ್ ಕಮಿಷನರ್ ಅನುಪಮ್ ಅಗರವಾಲ್ ಅವರ ಮಾರ್ಗದರ್ಶನ ಮತ್ತು ನಿರ್ದೇಶನದಲ್ಲಿ, ಪೊಲೀಸ್ ಉಪ ಕಮಿಷನರ್ (ಅಪರಾಧ ಮತ್ತು ಸಂಚಾರ) ಸಿದ್ಧಾರ್ಥ್ ಗೋಯಲ್, ಪೊಲೀಸ್ ಉಪ ಆಯುಕ್ತ (ಕಾನೂನು ಮತ್ತು ಸುವ್ಯವಸ್ಥೆ) ಬಿ ಪಿ ದಿನೇಶ್ ಕುಮಾರ್, ಮತ್ತು ಸಹಾಯಕ ಪೊಲೀಸ್ ಕಮಿಷನರ್ (ದಕ್ಷಿಣ) ಧನ್ಯಾ ನಾಯಕ್, ಉಳ್ಳಾಲ ಪೊಲೀಸ್ ಇನ್ಸ್‌ಪೆಕ್ಟರ್ ಬಾಲಕೃಷ್ಣ ಮತ್ತು ಅವರ ತಂಡ ತನಿಖೆ ಆರಂಭಿಸಿದ್ದು, ಆರೋಪಿಗಳನ್ನು ಬಂಧಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!