ರಾಹುಲ್ ಗಾಂಧಿಗೆ ಕೆನ್ನೆಗೆ ಯಾರಾದ್ರೂ ಹೊಡಿಬೇಕು: ಶಾಸಕ ಭರತ್ ಶೆಟ್ಟಿ ವಿವಾದಾತ್ಮಕ ಹೇಳಿಕೆ
ಮಂಗಳೂರು : ರಾಷ್ಟ್ರಪತಿಗಳ ಭಾಷಣಕ್ಕೆ ವಂದನೆ ಸಲ್ಲಿಕೆಯ ತನ್ನ ಭಾಷಣದ ವೇಳೆ ಹಿಂದೂ ಸಮಾಜವನ್ನು ಅವಹೇಳನ ಮಾಡಿದ್ದಾರೆ ಅಂತ ಬಿಜೆಪಿ ಪ್ರತಿಭಟನೆ ನಡೆಸ್ತಾ ಇದೆ. ಇದೇ ವಿಚಾರಕ್ಕೆ ಮಂಗಳೂರಿನಲ್ಲಿ ನಡೆಸಿದ ಪ್ರತಿಭಟನೆಯಲ್ಲಿ ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಮಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಆಕ್ರೋಶಭರಿತ ಮಾತನಾಡಿರುವ ಶಾಸಕ ಭರತ್ ಶೆಟ್ಟಿ “ರಾಹುಲ್ ಗಾಂಧಿಗೆ ಪಾರ್ಲಿಮೆಂಟ್ ಒಳಗೆ ಯಾರಾದ್ರೂ ಕೆನ್ನೆಗೆ ಹೊಡಿಬೇಕು ಅನಿಸುತ್ತಿದೆ” ಎಂಬ ವಿವಾದಾತ್ಮಕ ಭಾಷಣ ಮಾಡಿದ್ದಾರೆ.




