ಉಡುಪಿ: ಟೆಂಪೋ ಚಾಲಕ ನೇಣು ಬಿಗಿದು ಆತ್ಮಹತ್ಯೆ
ಉಡುಪಿ: ವೈಯುಕ್ತಿಕ ಕಾರಣಗಳಿಂದ ಮನನೊಂದು ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಮಡ ಘಟನೆ ಉದ್ಯಾವರ ಹಿಂದೂ ರುದ್ರಭೂಮಿಯಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಉದ್ಯಾವರ ಬೋಳಾರ್ ಗುಡ್ಡೆಯ ಆಟೋ ಟೆಂಪೋ ಚಾಲಕ / ಮಾಲಕ ಮಹೇಶ್ ಪಾಲನ್ (35) ಎಂದು ಗುರುತಿಸಲಾಗಿದೆ.
ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರಾಮದಾಸ್ ಪಾಲನ್ ಪುತ್ರನಾಗಿರುವ ಮಹೇಶ್ (ಮಾಹಿ), ಪುತ್ರಿಯನ್ನು ಶಾಲೆಗೆ ಬಿಟ್ಟು ಬಂದಿದ್ದು, ಬಳಿಕ ಮನೆ ಸಮೀಪದಲ್ಲಿರುವ ಕಟ್ಟಿಗೆ ತುಂಬಿರುವ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.




