ತಹಶೀಲ್ದಾರ್ ಕಚೇರಿಯಲ್ಲೇ ಸಿಬ್ಬಂದಿಗೆ ಚಾಕು ಇರಿತ
ಬೀದರ್: ಹಾಡುಹಗಲೇ ಬೀದರ್ ತಹಸೀಲ್ದಾರ್ ಕಚೇರಿಯ ಶಿರಸ್ತೇದಾರನಿಗೆ ಚಾಕು ಇರಿದ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ.
ಆಹಾರ ಶಾಖೆಯ ಶಿರಸ್ತೇದಾರ ಆಗಿರುವ ಅನಿಲ್ಕುಮಾರ್ ವ್ಯಾಸ್, ಚಾಕು ಇರಿತಕ್ಕೋಳಗಾದವರು. ಕರ್ತವ್ಯದಲ್ಲಿದ್ದ ವೇಳೆಯೇ ಅನೀಲ್ ಕುಮಾರಗೆ ಚಾಕು ಇರಿದು ವ್ಯಕ್ತಿ ಪರಾರಿಯಾಗಿದ್ದಾನೆ. ಕೂಡಲೇ ಗಾಯಾಳು ಅನೀಲ್ ಕುಮಾರ್ ಅವರನ್ನು ಬ್ರಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.




