ಪಿಸ್ತೂಲ್ ಹಿಡಿದು ರೈತರನ್ನು ಬೆದರಿಸಿದ ಆರೋಪ: ಪೂಜಾ ಖೇಡ್ಕರ್ ಪೋಷಕರ ವಿರುದ್ಧ FIR
ಮುಂಬೈ: ಪಿಸ್ತೂಲ್ ಹಿಡಿದು ರೈತರನ್ನು ಬೆದರಿಸಿದ ಹಳೆಯ ವಿಡಿಯೋ ವೈರಲ್ ಆದ ಬೆನ್ನಲ್ಲೇ ಪೂಜಾ ಅವರ ತಂದೆ ದಿಲೀಪ್ ಖೇಡ್ಕರ್ ಹಾಗೂ ತಾಯಿ ಮನೋರಮಾ ಖೇಡ್ಕರ್ ಅವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ರೈತರನ್ನು ಬೆದರಿಸಿದ ಪ್ರಕರಣಕ್ಕೆ ಸಂಬಂಧಿಸಿ ಭಾರತೀಯ ನ್ಯಾಯ ಸಂಹಿತಾ ಸೆಕ್ಷನ್ 323, 504, 506, 143, 144, 147, 148 ಮತ್ತು 149 ಮತ್ತು ಭಾರತೀಯ ಶಸ್ತ್ರಾಸ್ತ್ರ ಕಾಯ್ದೆಯ ಸೆಕ್ಷನ್ಗಳ ಅಡಿಯಲ್ಲಿ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.