13 ವಿಧಾನಸಭಾ ಸ್ಥಾನಗಳಿಗೆ ಉಪಚುನಾವಣೆ: ಅಯೋಧ್ಯ ಬಳಿಕ ಬದ್ರಿನಾಥದಲ್ಲೂ ಬಿಜೆಪಿಗೆ ಸೋಲು
ದಿಲ್ಲಿ: ಬದ್ರಿನಾಥದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಲಖಪತ್ ಸಿಂಗ್ ಬುಟೋಲಾ ಅವರು 3.5 ಸಾವಿರ ಮತಗಳಿಂದ ಗೆದ್ದಿದ್ದಾರೆ.
ಏಳು ರಾಜ್ಯಗಳ 13 ವಿಧಾನಸಭಾ ಸ್ಥಾನಗಳಿಗೆ ನಡೆದ ಉಪಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟದ ಪಕ್ಷಗಳು ಹೆಚ್ಚಿನ ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಲ್ಲಿವೆ.
ಈಗಾಗಲೇ, ಪಂಜಾಬ್ನ ಜಲಂಧರ್ನಲ್ಲಿ ಎಎಪಿ ಗೆದ್ದಿದ್ದು, ಹಿಮಾಚಲ ಪ್ರದೇಶದ ಡೆಹ್ರಾ ಕ್ಷೇತ್ರದಲ್ಲಿ ಅಲ್ಲಿನ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ನಾಯಕ ಸುಖವಿಂದರ್ ಸಿಂಗ್ ಸುಖು ಅವರ ಪತ್ನಿ ಕಮಲೇಶ್ ಠಾಕೂರ್ ಗೆಲುವು ಸಾಧಿಸಿದ್ದಾರೆ. ಇದೀಗ, ಉತ್ತರಾಖಂಡದ ಬದ್ರಿನಾಥ್ ಕ್ಷೇತ್ರದಲ್ಲಿಯೂ ಕಾಂಗ್ರೆಸ್ ಗೆಲುವು ಸಾಧಿಸಿದೆ.