March 17, 2026

ದೇವಸ್ಥಾನದಲ್ಲಿ ಕಾಲು ಜಾರಿ ಬಿದ್ದ ರೇವಣ್ಣ: ಐಸಿಯು ನಲ್ಲಿ ಚಿಕಿತ್ಸೆ

0
image_editor_output_image1433434938-1721212864943

ಹಾಸನ: ದೇವಸ್ಥಾನದಲ್ಲಿ ಕಾಲು ಜಾರಿ ಬಿದ್ದು ಮಾಜಿ ಸಚಿವ ಹೆಚ್ ಡಿ ರೇವಣ್ಣ ಅವರಿಗೆ ಪಕ್ಕೆಲುಬಿಗೆ ಪೆಟ್ಟಾಗಿರುವಂತಹ ಘಟನೆ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಹರದನಹಳ್ಳಿ ದೇವೇಶ್ವರ ದೇವಾಲಯದಲ್ಲಿ ನಡೆದಿದೆ.

ಸದ್ಯ ಹೊಳೆನರಸೀಪುರ ಸರ್ಕಾರಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಏಕಾದಶಿ ಪ್ರಯುಕ್ತ ಉಪವಾಸವಿದ್ದು, ದೇವಾಲಯಕ್ಕೆ ಭೇಟಿ ನೀಡಿದ್ದರು. ಈ ವೇಳೆ ಪೂಜೆ ಸಲ್ಲಿಸಿ ಬರುವಾಗ ಜಾರಿ ಬಿದಿದ್ದು, ಪಕ್ಕೆಲುಬುಗೆ ಪೆಟ್ಟಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!