September 8, 2024

ಶಿರಾಡಿ ಘಾಟ್ ನಲ್ಲಿ ಗುಡ್ಡ ಕುಸಿತ: ಹಾಸನ, ಬೆಂಗಳೂರು ತೆರಳುವ ವಾಹನ ಸಂಚಾರದಲ್ಲಿ ಬದಲಾವಣೆ

0

ವಿಟ್ಲ : ಶಿರಾಡಿ ಘಾಟ್ ನಲ್ಲಿ ಗುಡ್ಡ ಕುಸಿದಿರುವುದರಿಂದ ಸಕಲೇಶಪುರ, ಹಾಸನ, ಬೆಂಗಳೂರು ತೆರಳುವ ವಾಹನ ಸವಾರತು ಬದಲಿ ರಸ್ತೆಯಲ್ಲಿ ಸಂಚಾರ ನಡೆಸುವಂತೆ ಮಾಣಿಯಲ್ಲಿ ಬ್ಯಾರಿಕೇಡ್ ಅಳವಡಿಸಿರುವ ಪೊಲೀಸರು ಆ ದಾರಿಯಾಗಿ‌ ಬರುವ ವಾಹನ ಸವಾರರಿಗೆ ಮಾಹಿತಿ ನೀಡಿ ಬದಲಿ ರಸ್ತೆಯನ್ನು ಬಳಸುವಂತೆ ತಿಳಿಸುತ್ತಿದ್ದಾರೆ.

ಕಳೆದ ಕೆಲ ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿರಾಡಿ ಘಾಟ್ ನಲ್ಲಿ ಗುಡ್ಡ ಕುಸಿದು ವಾಹನ‌ ಸಂಚಾರಕ್ಕೆ ಸಮಸ್ಯೆಯಾಗಿದೆ. ಈ ಹಿನ್ನಲೆ ಸಕಲೇಶಪುರ ತೆರಳಿ ಹಾಸನ ಮೂಲಕ ಬೆಂಗಳೂರು ತೆರಳುವ ವಾಹನಗಳು ಮಡಿಕೇರಿ, ಮೈಸೂರು ಮಾರ್ಗವಾಗಿ ತೆರಳುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!