December 19, 2025

ಪುತ್ತೂರು: ಹೊಳೆ ಬಳಿ ಯುವಕನ ಬೈಕ್ ಪತ್ತೆ: ಹೊಳೆಗೆ ಹಾರಿರುವ ಶಂಕೆ

0
image_editor_output_image-1498589039-1721449658147

ಪುತ್ತೂರು: ಕುದ್ಮಾರು ಗ್ರಾಮದ ಯುವಕನೊಬ್ಬ ಕಾಣೆಯಾಗಿದ್ದು, ಸರ್ವೆ ಗೌರಿ ಸೇತುವೆ ಸಮೀಪ ಆತನ ದ್ವಿಚಕ್ರ ವಾಹನ ಪತ್ತೆಯಾಗಿದೆ. ಯುವಕ ಗೌರಿ ಹೊಳೆಗೆ ಹಾರಿರುವ ಶಂಕೆ ವ್ಯಕ್ತವಾಗಿದ್ದು ಸ್ಥಳದಲ್ಲಿ ಸಾರ್ವಜನಿಕರು ಜಮಾಯಿಸಿದ್ದಾರೆ.

ಯುವಕ ಹೊಳೆಗೆ ಹಾರಿದ್ದಾನೆಯೇ ಅಥವಾ ಎಲ್ಲಿಗಾದರೂ ಹೋಗಿದ್ದಾನೆಯೇ ಎನ್ನುವ ಸಂಶಯವೂ ವ್ಯಕ್ತವಾಗಿದೆ.
ಸ್ಥಳಕ್ಕೆ ಅಗ್ನಿ ಶಾಮಕ ದಳದವರು ಆಗಮಿಸಿದ್ದಾರೆ.
ಪೊಲೀಸರು ನಿನ್ನೆ ರಾತ್ರಿಯೇ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದರು ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

You may have missed

error: Content is protected !!