February 1, 2026

ಪುತ್ತೂರು ಪೊಲೀಸ್ ಠಾಣಾ ಎಎಸ್‌ಐ ನಿಧನ

0
image_editor_output_image-577874842-1721631034065.jpg

ಪುತ್ತೂರು: ಪುತ್ತೂರ ನಗರ ಠಾಣಾ ಎಎಸ್‌ಐ, ಬೆಳ್ಳಾರೆ ಪೆರುವಾಜೆ ಗ್ರಾಮದ ಕಾನಾವು ನಿವಾಸಿ ಸುಂದರ ಕಾನಾವು(45) ಜು.22ರಂದು ಬೆಳಿಗ್ಗೆ ನಿಧನರಾಗಿದ್ದಾರೆ.

ಕಳೆದ ಮೂರು ದಿನಗಳ ಹಿಂದೆ ಮನೆಯಲ್ಲಿ ಬ್ರೈನ್ ಸ್ಟ್ರೋಕ್‌ ಗೆ ಒಳಗಾಗಿದ್ದ ಅವರನ್ನು ಮಂಗಳೂರಿನ ಪಡೀಲು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗೆ ಮೃತಪಟ್ಟಿದ್ದಾರೆ.

ಮುಲ್ಕಿ ಪೊಲೀಸ್ ಠಾಣೆಯಲ್ಲಿ ಸೇವೆಗೆ ಸೇರಿದ ಇವರು ಬಳಿಕ ಸುಬ್ರಹ್ಮಣ್ಯ ಠಾಣೆಯಲ್ಲಿ ಸೇವೆ ಸಲ್ಲಿಸಿ ಹೆಡ್ ಕಾನ್ಸ್ಟೇಬಲ್ ಆಗಿ ಭಡ್ತಿಗೊಂಡಿದ್ದರು. ಅಲ್ಲಿಂದ ಬಂಟ್ವಾಳ ಠಾಣೆಗೆ ವರ್ಗಾವಣೆಗೊಂಡಿದ್ದರು.

ಬಂಟ್ವಾಳದಿಂದ ಸಂಪ್ಯ ಠಾಣೆಗೆ ವರ್ಗಾವೆಣೆಗೊಂಡು ಅಲ್ಲಿ ಪೊಲೀಸ್ ಸಹಾಯಕ ಉಪನಿರೀಕ್ಷಕರಾಗಿ ಭಡ್ತಿಗೊಂಡು ಇತ್ತೀಚೆಗೆ ಪುತ್ತೂರು ನಗರ ಠಾಣೆಗೆ ವರ್ಗಾವಣೆಗೊಂಡಿದ್ದರು. ಮೃತರು ಪತ್ನಿ ಲತಾ, ಪುತ್ರ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!