ಶಿವಮೊಗ್ಗ: ಪ್ರಿಯತಮೆಯನ್ನು ಕೊಲೆಗೈದ ಪ್ರಿಯಕರ
ಶಿವಮೊಗ್ಗ: ಮದುವೆಯಾಗುವಂತೆ ಪೀಡಿಸುತ್ತಿದ್ದಳೆಂದು ಪ್ರಿಯತಮೆ ಮೇಲೆ ಹಲ್ಲೆ ನಡೆಸಿ ಪ್ರಿಯಕರ ಕೊಂದಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಮೂಲದ ಯುವತಿ ಸೌಮ್ಯ ಕೊಲೆಯಾದವಳು. ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದ ಯುವಕ ಸೃಜನ್ ಕೊಲೆ ಮಾಡಿದ ಆರೋಪಿ.
ಇವರಿಬ್ಬರು ಕಳೆದ ಎರಡು ವರ್ಷಗಳಿಂದ ಪ್ರೀತಿಸುತ್ತಿದ್ದರು. ಮದುವೆಯಾಗುವಂತೆ ಯುವತಿಯಿಂದ ಒತ್ತಡ ಹೆಚ್ಚಾದ ಹಿನ್ನೆಲೆಯಲ್ಲಿ ಪ್ರಿಯಕರ ಕೊಲೆ ಮಾಡಿದ್ದಾನೆಂದು ತಿಳಿದುಬಂದಿದೆ.




