October 18, 2024

ಮಲೆನಾಡಿನಲ್ಲಿ ಮುಂದುವರಿದ ಮಳೆಯ ಅಬ್ಬರ: ಶಿವಮೊಗ್ಗ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

0

ಶಿವಮೊಗ್ಗ: ಮಲೆನಾಡಿನಲ್ಲಿ ಮಳೆಯ ಅಬ್ಬರ ಜೋರಾಗಿದ್ದು ಪರಿಣಾಮ ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಶಿವಮೊಗ್ಗ ಜಿಲ್ಲೆಯ ಮೂರೂ ತಾಲೂಕಿನ ಶಾಲಾ ಕಾಲೇಜುಗಳಿಗೆ ಇಂದು( ಜುಲೈ 26) ರಂದು ರಜೆ ಘೋಷಣೆ ಮಾಡಲಾಗಿದೆ.

ಭಾರಿ ಗಾಳಿ ಮಳೆ ಸುರಿಯುತ್ತಿರುವುದರಿಂದ ಹೊಸನಗರ, ತೀರ್ಥಹಳ್ಳಿ ಹಾಗೂ ಸಾಗರ ತಾಲೂಕಿನ ಎಲ್ಲಾ ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪದವಿ ಪೂರ್ವ, ಪದವಿ ಹಾಗೂ ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಣೆ ಮಾಡಿ ಮೂರು ತಾಲೂಕಿನ ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!