December 15, 2025

ಉಡುಪಿ: ಅಧಿಕಾರಿಗಳ ಸೋಗಿನಲ್ಲಿ ಮನೆಗೆ ಬಂದ ಅಪರಿಚಿತ ತಂಡ: ತನಿಖೆಗೆ ಪೊಲೀಸ್ ತಂಡ ರಚನೆ

0
IMG-20240729-WA0003.jpg

ಉಡುಪಿ: ಅಧಿಕಾರಿಗಳ ಸೋಗಿನಲ್ಲಿ ಮನೆಗೆ ಅಪರಿಚಿತ ತಂಡ ಬಂದ ಘಟನೆ ಉಡುಪಿ ಜಿಲ್ಲೆಯಲ್ಲಿ ಬ್ರಹ್ಮಾವರ ತಾಲೂಕಿನ ಮಣೂರು ಗ್ರಾಮದ ಕವಿತಾ ಎಂಬುವರ ನಿವಾಸಕ್ಕೆ ಇದೇ ಜುಲೈ 25ರ ಮುಂಜಾನೆ 8:30 ರ ಸುಮಾರಿಗೆ ನಡೆದಿದೆ.

ದಿನದ 24 ಗಂಟೆಯೂ ಲೈವ್ ಸರ್ವೆಲೆನ್ಸ್ ಮಾಡುವ ಸಿ ಸಿ ಕ್ಯಾಮೆರಾ ಸೆಕ್ಯೂರಿಟಿ ಸಂಸ್ಥೆಯ ಸಕಾಲದ ಎಚ್ಚರಿಕೆ ಹಿನ್ನೆಲೆಯಲ್ಲಿ ಅನಾಹುತ ತಪ್ಪಿದೆ.

ಬಂದವರು ಯಾರೆನ್ನುವ ನಿಟ್ಟಿನಲ್ಲಿ ಪೊಲೀಸ್ ತನಿಖೆ ನಡೆಯುತ್ತಿದೆ. ಎರಡು ಪ್ರತ್ಯೇಕ ತಂಡಗಳು ಬೇರೆ ಬೇರೆ ಕಡೆ ಹೋಗಿ ತನಿಖೆ ನಡೆಸುತ್ತಿವೆ. ದರೋಡೆ ಮಾಡುವ ಉದ್ದೇಶವಿತ್ತೇ ಎನ್ನುವುದು ಸದ್ಯದ ಅನುಮಾನ. ಐಟಿ, ಇಡಿ ಮೊದಲಾದ ಸರ್ಕಾರಿ ಇಲಾಖೆ ಅಧಿಕಾರಿಗಳೇ ಆಗಿದ್ದರೆ ಪೊಲೀಸರಿಗೆ ಮಾಹಿತಿ ನೀಡಿ ಬಾಗಿಲು ತೆರೆಸುತ್ತಿದ್ದರು ಅಥವಾ ಬಾಗಿಲು ತೆರೆಯಲು ಬೇಕಾದ ಸೂಕ್ತ ಕಾನೂನು ವ್ಯವಸ್ಥೆ ಮಾಡುತ್ತಿದ್ದರು. ಆಗಂತುಕರು ವಿಗ್ ಇತ್ಯಾದಿ ಧರಿಸಿ ಗುರುತು ಮರೆಮಾಚುವಂತೆ ಕಂಡುಬರುತ್ತಿತ್ತು.

6-8 ಜನರ ಇನ್ನೋವಾ, ಸ್ವಿಫ್ಟ್ ಕಾರಿನಲ್ಲಿ ಮನೆ ಬಳಿ ಬಂದಿದ್ದರು. ಬಳಿಕ ಕಾಂಪೌಂಡ್ ಹಾರಿ ಮನೆಯ ಆವರಣ ಪ್ರವೇಶೀಸಿದ್ದರು. ನಂತರ ಬಾಗಿಲು ಬಡಿದು ಮನೆಯವರನ್ನ ಕರೆದಿದ್ದಾರೆ. ಆದರೆ, ಮನೆ ಬಾಗಿಲು ತೆರೆಯದಿದ್ದರಿಂದ ಕಿಟಕಿಗಳನ್ನು ತೆರೆಯಲು ಯತ್ನಿಸಿದ್ದಾರೆ. ಇನ್ನು ಮನೆಯ ಕಾಂಪೌಂಡ್ ಹಾರಿ, ಒಳ ಪ್ರವೇಶಿಸಿ ಕೆಲವು ವಸ್ತುಗಳಿಗೆ ಹಾನಿ ಮಾಡಿ ತೆರಳಿದ ಎಂಟು ಜನರ ತಂಡದ ಭಯಾನಕ ಕೃತ್ಯ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

Leave a Reply

Your email address will not be published. Required fields are marked *

error: Content is protected !!