February 2, 2026

ಬಂಟ್ವಾಳ ತಾಲೂಕಿನಾದ್ಯಂತ ಧಾರಾಕಾರ ಮಳೆ: ಅಪಾಯದ ಮಟ್ಟ ತಲುಪಿರುವ ನೇತ್ರಾವತಿ ನದಿ

0
image_editor_output_image1559335566-1722319228189.jpg

ಬಂಟ್ವಾಳ ತಾಲೂಕಿನಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ನದಿ ತೀರ ಪ್ರದೇಶದ ಶಾಲೆಗಳಿಗೆ ರಜೆ ಸಾರಲಾಗಿದೆ. ನೇತ್ರಾವತಿ ನದಿ ಅಪಾಯದ ಮಟ್ಟ ತಲುಪಿದೆ.

ಪಾಣೆಮಂಗಳೂರು, ಬಂಟ್ವಾಳ ಸಹಿತ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಆಲಡ್ಕದಲ್ಲಿ ಸುಮಾರು ಹದಿನೈದು ಮನೆಗಳು ಜಲಾವೃತಗೊಂಡಿರುವುದಾಗಿ ಪುರಸಭಾ ಸದಸ್ಯ ಸಿದ್ದೀಕ್ ಗುಡ್ಡೆಯಂಗಡಿ ಮಾಹಿತಿ ನೀಡಿದ್ದಾರೆ. ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಇನ್ನು ಚಾರ್ಮಾಡಿ, ಶಿರಾಡಿ ಘಾಟಿಯಲ್ಲಿ ರಸ್ತೆ ಸಂಚಾರಕ್ಕೆ ಅಡಚಣೆ ಉಂಟಾಗಿದೆ.

Leave a Reply

Your email address will not be published. Required fields are marked *

error: Content is protected !!