December 19, 2025

ಮಂಗಳೂರು: ಗುರುಪುರ ಫಲ್ಗುಣಿ ನದಿ ಹರಿವಿನ ಮಟ್ಟದಲ್ಲಿ ಏರಿಕೆ, ಮೂಡುಶೆಡ್ಡೆ ಪ್ರದೇಶ ಜಲಾವೃತ

0
image_editor_output_image1793026966-1722492257280.jpg

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ ಮುಂಜಾನೆಯಿಂದ ಮಳೆ ಕೊಂಚ ತಗ್ಗಿದೆ ಆದ್ರೂ ಘಟ್ಟ ಪ್ರದೇಶಗಳಲ್ಲಿ ಮಳೆ ಮುಂದುವರೆದ್ದರಿಂದ ನದಿಗಳಲ್ಲಿ ನೀರಿನ ಮಟ್ಟ ಏರಿಕೆ ಕಂಡು ಆನೆಕ ಕಡೆ ನೆರೆ ನೀರು ನಿಂತು ಜನಜೀವನ ಅಸ್ತವ್ಯಸ್ತಗೊಂಡಿದೆ.

ಮಂಗಳೂರು ನಗರದಲ್ಲಿ ರಾತ್ರಿ ಸುರಿದ ಮಳೆ ಹೊರವಲಯದ ಗುರುಪುರ ಫಲ್ಗುಣಿ ನದಿ ಹರಿವಿನ ಮಟ್ಟದಲ್ಲಿ ಏರಿಕೆ ಕಂಡು ಸುತ್ತ ಮುತ್ತಲ ಗ್ರಾಮಗಳಿಗೆ ನೀರು ನುಗ್ಗಿತ್ತು.

ಮೂಡುಶೆಡ್ಡೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಅರ್ಬಿ ದಿಡ್ಪೆ ಹೌಸ್ ಸಂಜೀವ್ ಅವರ ಮನೆಗೆ ನೀರು ನುಗ್ಗಿತ್ತು.

ರಾತ್ರಿ ವೇಳೆ ಮನೆ ಒಳಗೆ ನೀರು ನುಗ್ಗಿತ್ತು. ಆದ್ರೆ ಗ್ರಾಮೀಣ ಪ್ರದೇಶವಾದ ಕಾರಣ ಕಾರ್ಯಾಚರಣೆ ನಡೆಸಲಾಗದೆ ಇಂದು ಬೆಳಿಗ್ಗೆ ಮಂಗಳೂರು ಪಾಂಡೇಶ್ವರ ಅಗ್ನಿ ಶಾಮಕ ದಳದ ಅಧಿಕಾರಿಗಳು ಭೇಟಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!