ವಯನಾಡು ದುರಂತ: ಮಂಡ್ಯದ ಅಜ್ಜಿ, ಮೊಮ್ಮಗ ಮೃತ್ಯು
ಮಂಡ್ಯ: ಕೇರಳದ ವಯನಾಡು ದುರಂತದಲ್ಲಿ ಪ್ರಾಣ ಕಳಕೊಂಡ ಮಂಡ್ಯ ಕೆ.ಆರ್.ಪೇಟೆ ತಾಲೂಕಿನ ಕತ್ತರಘಟ್ಟ ಗ್ರಾಮದ ಅಜ್ಜಿ ಮತ್ತು ಮೊಮ್ಮಗನ ಅಂತ್ಯಕ್ರಿಯೆಯನ್ನು ಗುರುವಾರ ಮಧ್ಯರಾತ್ರಿ ನೆರವೇರಿಸಲಾಯಿತು.
ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆ ತಾಲೂಕಿನ ಕತ್ತರಘಟ್ಟದ 55 ವರ್ಷದ ಲೀಲಾವತಿ ಹಾಗೂ 2.5 ವರ್ಷದ ಮೊಮ್ಮಗ ನಿಹಾಲ್ ಮೃತಪಟ್ಟಿದ್ದರು. ಮೃತ ನಿಹಾಲ್ ತಾಯಿ ಝಾನ್ಸಿ ಅವರು ಅಜ್ಜಿ ಮೊಮ್ಮಗನ ಅಂತ್ಯ ಸಂಸ್ಕಾರ ನಮ್ಮೂರಿನಲ್ಲಿಯೇ ಆಗಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದರು.




