ಬೆಳ್ತಂಗಡಿ: ಗುತ್ತಿಗೆದಾರ ಡಿ.ಪಿ.ಜೈನ್ ಕಂಪನಿಯ ಕಾರ್ಮಿಕ ಆತ್ಮಹತ್ಯೆಗೆ ಯತ್ನ
ಬೆಳ್ತಂಗಡಿ: ಪುಂಜಾಲಕಟ್ಟೆ- ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಗುತ್ತಿಗೆದಾರ ಡಿ.ಪಿ ಕಂಪನಿಯ ಕಾರ್ಮಿಕ ಆತಹತ್ಯೆಗೆ ಯತ್ನಿಸಿದ ಘಟನೆ ಆ.6 ರಂದು ಸಂಜೆ ನಡೆದಿದೆ.
ಡಿ.ಪಿ.ಜೈನ್ ಕಂಪನಿಯಲ್ಲಿ ಡ್ರೈವರ್ ಆಗಿ ಕರ್ತವ್ಯ ನಿರ್ವಹಿಸುತಿದ್ದ ನಾಗಪುರ ಮೂಲದ ಪ್ರಮೋದ್ ಜಾಡೆ (31) ಎಂಬಾತ ಪ್ಲಾಂಟೇಷನ್ ನಲ್ಲಿ ಲಾರಿಯ ಸೀಟ್ ಬೆಲ್ಟ್ ನಿಂದ ಆತ್ಮಹತ್ಯೆಗೆ ಯತ್ನಿಸಿದ್ದು ತಕ್ಷಣ ಅಲ್ಲಿದ್ದ ಇತರ ನೌಕರರು ಬೆಳ್ತಂಗಡಿ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.





