ಪ್ರೀತಿಸಿ ಮದುವೆಯಾದ ದಿನದಂದೇ ನವಜೋಡಿಯ ಹೊಡೆದಾಟ: ಯುವತಿ ಮೃತ್ಯು, ಯುವಕನ ಸ್ಥಿತಿ ಗಂಭೀರ
ಕೋಲಾರ: ಪರಸ್ಪರ ಪ್ರೀತಿಸಿ ಒಪ್ಪಿ ಬೆಳಗ್ಗೆ ಮದುವೆಯಾದ ನವಜೋಡಿ, ಅದೇ ದಿನ ಮಧ್ಯಾಹ್ನ ಮಾರಕಾಸ್ತ್ರಗಳಿಂದ ಹೊಡೆದಾಡಿಕೊಂಡ ಪರಿಣಾಮ ನವವಧು ಸಾವನ್ನಪ್ಪಿದ್ದಾಳೆ. ಮದುಮಗನ ಸ್ಥಿತಿ ಚಿಂತಾಜನಕವಾಗಿದೆ.
ಕೋಲಾರ ಜಿಲ್ಲೆಯ ಕೆಜಿಎಫ್ ತಾಲ್ಲೂಕಿನ ಚಂಬರಸನಹಳ್ಳಿಯಲ್ಲಿ ಘಟನೆ ನಡೆದಿದೆ. ಆಂಧ್ರದ ಬೈನಪಲ್ಲಿ ಗ್ರಾಮದ ಲಿಖಿತಾಶ್ರೀ ಮೃತಪಟ್ಟಿದ್ದಾಳೆ. ಚಂಬರಸನಹಳ್ಳಿಯ ನವೀನ್ ಸ್ಥಿತಿ ಗಂಭೀರವಾಗಿದೆ.




