ರೈಲ್ವೆ ಹಳಿ ಮೇಲೆ ಮತ್ತೆ ಭೂ ಕುಸಿತ: ಮಂಗಳೂರು-ಬೆಂಗಳೂರು ರೈಲು ಸಂಚಾರ ಸ್ಥಗಿತ
ಸಕಲೇಶಪುರ: ರೈಲ್ವೆ ಹಳಿ ಮೇಲೆ ಮತ್ತೆ ಭಾರಿ ಪ್ರಮಾಣದಲ್ಲಿ ಮಣ್ಣು ಕುಸಿತವಾಗಿದ್ದು ಮರಗಳ ಸಮೇತವಾಗಿ ರೈಲ್ವೆ ಹಳಿ ಮೇಲೆ ಮಣ್ಣು ಕುಸಿದಿರುವ ಘಟನೆ ತಾಲೂಕಿನ ಬಾಳ್ಳುಪೇಟೆ ಸಮೀಪ ಕಿಲೋಮೀಟರ್ ಸಂಖ್ಯೆ 42/43 ರ ಮಧ್ಯೆ ನಡೆದಿದ್ದು ಈ ಹಿನ್ನಲೆಯಲ್ಲಿ ಬೆಂಗಳೂರು-ಮಂಗಳೂರು ಮಾರ್ಗದ ರೈಲುಗಳ ಸಂಚಾರ ಸ್ಥಗಿತವಾಗಿದೆ.
ಶನಿವಾರ ಮುಂಜಾನೆ ಸಕಲೇಶಪುರ ಹಾಗೂ ಬಾಳ್ಳುಪೇಟೆ ರೈಲು ಮಾರ್ಗ ಮಧ್ಯೆ ಭೂಕುಸಿತ ಉಂಟಾಗಿದೆ. ಇದರಿಂದಾಗಿ ಆಗಸ್ಟ್ 9 ರಂದು ಹೊರಟಿದ್ದ ಬೆಂಗಳೂರು-ಕಣ್ಣೂರು (ಕಣ್ಣೂರು ಎಕ್ಸ್ ಪ್ರೆಸ್) ಮತ್ತು ಬೆಂಗಳೂರು-ಮರ್ಡೇಶ್ವರ (ಮುರ್ಡೇಶ್ವರ ಎಕ್ಸ್ ಪ್ರೆಸ್) ರೈಲುಗಳು ಆಲೂರು ಹಾಗೂ ಹಾಸನದಲ್ಲಿ ಸ್ಥಗಿತಗೊಂಡಿದೆ.




